ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಹಾಗೂ ಉತ್ತರ ಛಳಿಯ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 26ರಿಂದ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ದಿಕ್ಕು ಬದಲಾಗುವ ಕಾರಣದಿಂದ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಛಳಿ ಪ್ರಮಾಣವು ಸ್ವಲ್ಪ ಕಡಿಮೆಯಾಗುವ ಸಾಧ್ಯತೆಗಳಿದ್ದು, ಡಿಸೆಂಬರ್ 28ರಿಂದ ದಕ್ಷಿಣದ ಕನ್ಯಾಕುಮಾರಿ ಕಡೆಯಿಂದ ಉತ್ತರಕ್ಕೆ ಗಾಳಿ ಬೀಸಲು ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಕರಾವಳಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಛಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈ ವಾತಾವರಣವು 2026ರ ಜನವರಿ 2 ಅಥವಾ 3ನೇ ತಾರೀಕಿನ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. ಉತ್ತರ ಒಳನಾಡು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಛಳಿಯು ಕಡಿಮೆಯಾಗಿ ಸಾಮಾನ್ಯ ಛಳಿಯ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ.