13 October 2021

14.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

14.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

 ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ದಕ್ಷಿಣ ಭಾಗ) ಭಾರಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು(ಉತ್ತರ ಭಾಗ), ಹಾಸನ, ಮಂಡ್ಯ, ಉಳಿದ ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಕೆಲವು ಭಾಗಗಳಲ್ಲಿ ಬಿಸಿಲು ಮತ್ತು ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 


ವಾಯುಭಾರ ಕುಸಿತದ ಈಗಿನ ಸ್ಥಿತಿ : ಕರ್ನಾಟಕದ ಮಂಗಳೂರು ಕರಾವಳಿ ಸಮೀಪ ತಲುಪಿರುವ ವಾಯುಭಾರ ಕುಸಿತವು ಈಗಿನ ಪ್ರಕಾರ 17ನೇ ತಾರೀಕಿನಂದು ಉತ್ತರ ಕನ್ನಡ ಕರಾವಳಿ ತಲುಪಿ ಶಿಥಿಲಗೊಳ್ಳುವ ಸಾಧ್ಯತೆ ಇದೆ. 

No comments:

Post a Comment