16.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆ ಮತ್ತು ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಕೊಡಗು, ಮೈಸೂರು (ಉತ್ತರ ಭಾಗ), ಹಾಸನ, ಮಂಡ್ಯ, ರಾಮನಗರ, ಚಾಮರಾಜನಗರ (ಒಂದೆರಡು ಕಡೆ), ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ (ಹೊಸದುರ್ಗಾ ಸುತ್ತಮುತ್ತ), ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಜೊತೆಗೆ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ದುರ್ಬಲಗೊಳ್ಳಲು ಆರಂಭವಾಗಿದ್ದು ಇನ್ನೆರಡು ದಿನಗಳಲ್ಲಿ ಸಂಪೂರ್ಣ ಶಿಥಿಲಗೊಳ್ಳುವ ಮುನ್ಸೂಚೆನೆ ಇದೆ. ಈದೇ ಸಂದರ್ಭದಲ್ಲಿ ಬಂಗಾಳಕೂಲ್ಲಿಯ ಅಂದ್ರಾ, ಒಡಿಸ್ಸಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ.
ಆದರೆ ಈಗಿನ ಪ್ರಕಾರ ಈ ಎರಡೂ ವಾಯುಭಾರ ಕುಸಿತವು ಕರ್ನಾಟಕದ ಮೇಲೆ ಅಷ್ಟೇನು ಪರಿಣಾಮ ಬೀರುವ ಲಕ್ಷಣಗಳಿಲ್ಲ.
No comments:
Post a Comment