20 10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಕಾಸರಗೋಡು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಶ್ರೀಲಂಕಾ ದಕ್ಷಿಣ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ರೂಪುಗೊಳ್ಳುತ್ತಿದ್ದು, ನಾಳೆ ಅಂದರೆ 20.10.21ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಸೇರಿದಂತೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.
ಈ ಸುಳಿಗಾಳಿಯು ಹಿಂಗಾರು ಮಳೆ ಚುರುಕುಗೊಳ್ಳಲು ಸಹಾಯ ಮಾಡುವ ಸಾಧ್ಯತೆ ಇದೆ ಮತ್ತು ಮಳೆ ಒಂದು ವಾರದ ಮಟ್ಟಿಗೆ ಮುಂದುವರಿಯುವ ಮುನ್ಸೂಚೆನೆ ಇದೆ.
No comments:
Post a Comment