12.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :
ವಾಯುಭಾರ ಕುಸಿತ ಇಂದು ಮಧ್ಯಾಹ್ನ ತಮಿಳುನಾಡು ಕರಾವಳಿ ಪ್ರವೇಶಿಸಲಿದೆ.
ಉತ್ತರ ಭಾರತದ ಕಡೆಯಿಂದ ಛಳಿ ಗಾಳಿ ದಕ್ಷಿಣ ಕಡೆಗೆ ಬೀಸುತ್ತಿವುದರ ಪರಿಣಾಮ ಕರ್ನಾಟಕದ ಮೇಲೆ ವಾಯುಭಾರ ಕುಸಿತವು ನಿರೀಕ್ಷೆಗಿಂತ ಕಡಿಮೆ ಪ್ರಭಾವ ಬೀರುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ, ಕಾಸರಗೋಡು, ಉಡುಪಿ ಜಿಲ್ಲಾ ಭಾಗಗಳಲ್ಲಿ ಮೋಡ ಮತ್ತು ತಂಪು ವಾತಾವರಣದ ಮುನ್ಸೂಚೆನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
No comments:
Post a Comment