ಕಾಸರಗೋಡು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು, ರಾಮನಗರ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ,, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ಈಗಾಗಲೇ ಮುಂಗಾರು ಕೇರಳ ರಾಜ್ಯಕ್ಕೆ ಪ್ರವೇಶಿಸಿದ್ದರೂ ದುರ್ಬಲಗೊಂಡಿದೆ.
ರಾಜ್ಯಕ್ಕೆ ಅಧಿಕೃತವಾಗಿ ಪ್ರವೇಶಿಸಿದ ಮುಂಗಾರು ದುರ್ಬಲವಾಗಿದ್ದು ಈಗಿನ ಪ್ರಕಾರ ಜೂನ್ 7ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಪ್ರಭಲವಾಗುವ ಮುನ್ಸೂಚನೆ ಇದೆ. ಅಲ್ಲಿಯ ತನಕ ದಿನಕ್ಕೆ ಒಂದು ಮಳೆಯ ಸಾಧ್ಯತೆ ಇದೆ.