04.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಹಾವೇರಿ, ಧಾರವಾಡ, ಬೆಳಗಾವಿ, ವಿಜಾಪುರ, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಕರಾವಳಿಯಲ್ಲಿ ವಿಶೇಷ ರೀತಿಯ ಮುಂಗಾರು ಹಗಲು ಹೊತ್ತಿನಲ್ಲಿ ಮಳೆ ಕಡಿಮೆ ಇದ್ದರೆ ಸಂಜೆ, ರಾತ್ರಿ ಆಗುತ್ತಿದ್ದಂತಯೇ ಭಾರಿ ಮಳೆ ಸುರಿಯುತ್ತಿದೆ.
ಈಗನ ಪ್ರಕಾರ ಜುಲೈ 6ರಿಂದ ದಕ್ಷಿಣ ಭಾರತದಲ್ಲಿ ಮುಂಗಾರು ತೀವ್ರತೆ ಸ್ವಲ್ಪ ಕಡಿಮೆ ಆಗಿ ಉತ್ತರ ಭಾರತದ ಹಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
No comments:
Post a Comment