06.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಆಗುಂಬೆ, ಭಟ್ಕಳ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ Red Alert ಇದೆ.
ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಕೋಲಾರ ಸಾಮಾನ್ಯವಾಗಿದ್ದರೆ, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಉತ್ತಮ ಮಳೆಯ ಮುನ್ಸೂಚನೆ ಇದೆ
ಬಾಗಲಕೋಟೆ, ಕೊಪ್ಪಳ, ಗದಗ, ರಾಯಚೂರು, ಯಾದಗಿರಿ ಅಲ್ಲಲ್ಲಿ ಸಾಮಾನ್ಯವಾಗಿದಾದರೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗನ ಮಳೆಯು ನೈರುತ್ಯ ಮುಂಗಾರು ಹೆಸರಿಗೆ ತಕ್ಕಂತೆ ನೈರುತ್ಯದಿಂದ ಈಶಾನ್ಯಕ್ಕೆ ಸಂಚರಿಸುತ್ತಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಆಗಷ್ಟ್ 6ರ ತನಕ ಉತ್ತಮ ಮಳೆಯ ಮುಂದುವರಿಯುವ ಮುನ್ಸೂಚನೆ ಇದ್ದು 7ನೇ ತಾರೀಕಿನಿಂದ ಒಳನಾಡು ಭಾಗಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ.
ಆಗಷ್ಟ್ 11ರ ನಂತರ ಮಲೆನಾಡು ಭಾಗಗಳಲ್ಲಿ ಕಡಿಮೆಯಾದರೆ ಕರಾವಳಿ ಭಾಗಗಳಲ್ಲಿ ಮತ್ತೆರಡು ದಿನಗಳ ಕಾಲ ಸಾಮಾನ್ಯ ಮಳೆಯ ಲಕ್ಷಣಗಳಿವೆ.
No comments:
Post a Comment