22.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು ಹಾಗೂ ಹಾಸನ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಮೋಡ ಅಥವಾ ಅಲ್ಲಲ್ಲಿ ತುಂತುರು, ಚಾಮರಾಜನಗರ( ಕೊಳ್ಳೇಗಾಲ ಸುತ್ತಮುತ್ತ ) ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ. ರಾಯಚೂರು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಆಗಸ್ಟ್ 22ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಅರಬ್ಬಿ ಸಮುದ್ರದ ರಾಜ್ಯದ ಕರಾವಳಿ ಭಾಗದಲ್ಲಿ ಉಂಟಾಗಿರುವ ತಿರುವಿಕೆಯ ಪ್ರಭಾವದಿಂದ ಮುಂಗಾರು ಮಾರುತಗಳು ಚುರುಕಾಗುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲದ್ದು. ಆಗಸ್ಟ್ 24ರಿಂದ ಮಲೆನಾಡು ಭಾಗಗಳಲ್ಲಿಯೂ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
No comments:
Post a Comment