ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ, ಛಳಿ ಮುಂದುವರಿಯುವ ಮುನ್ಸೂಚೆನೆ ಇದೆ.
ಡಿಸೆಂಬರ್ 26ರಂದು ಉತ್ತರ ಶ್ರೀಲಂಕಾ ಕೇಂದ್ರವಾಗಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ತಮಿಳುನಾಡು ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗುವ ಸಾಧ್ಯತೆಗಳಿವೆ.
ಇದರ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 26ರ ನಂತರ ಛಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಡಿಸೆಂಬರ್ 29ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಳೆಯ ಸಾಧ್ಯತೆಯ ಬಗ್ಗೆ ಡಿಸೆಂಬರ್ 26ರ ನಂತರ ನೋಡಬೇಕಾಗಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದರೆ ಮಾತ್ರ ಮಳೆಯ ಸಾಧ್ಯತೆಗಳಿವೆ.
No comments:
Post a Comment