ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ ಒಣ ಹವೆ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಫೆಬ್ರುವರಿ 9 ಹಾಗೂ 10ನೇ ತಾರೀಕಿನಂದು ಮಧ್ಯಾಹ್ನ ನಂತರ ಅಲ್ಲಲ್ಲಿ ಹಗುರ ಹಾಗೂ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಸೂರ್ಯನು ಉತ್ತರ ದಿಕ್ಕಿಗೆ ಚಲಿಸುವ ಪ್ರಕ್ರಿಯೆಯಿಂದಾಗಿ ಸಹಜವಾಗಿಯೇ ವಾತಾವರಣದ ಉಷ್ಣತೆ ಹೆಚ್ಚುತ್ತಿದ್ದು, ಇದಕ್ಕೆ ಪೂರಕವಾಗಿ ಸೂರ್ಯ ಜ್ವಾಲಾ ಸ್ಫೋಟಗಳು ಈ ವಾರ ಉಂಟಾಗುವ ವರದಿಗಳಿರುವುದರಿಂದ ಈ ವರ್ಷದ ಬೆಸೆಯ ಉಷ್ಣತೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ.
ಆದರೆ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬೇಸಿಗೆ ಹಾಗೂ ಪೂರ್ವ ಮುಂಗಾರು ಮಳೆಯು ಚೆನ್ನಾಗಿರುವ ವರದಿಗಳಿದ್ದು, ಜೂನ್ ತಿಂಗಳಲ್ಲಿ ಎಲ್ ನಿನೋ ಆರಂಭವಾಗುವ ಲಕ್ಷಣಗಳಿವೆ.
ಇದರಿಂದ ಈ ವರ್ಷದ ಮುಂಗಾರು ದುರ್ಬಲವಾಗಿರುವ ಸಾಧ್ಯತೆಗಳೂ ಇವೆ.
No comments:
Post a Comment