ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿಯೊಂದಿಗೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 1ರ ತನಕ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 2ನೇ ತಾರೀಕಿನಿಂದ ಮಳೆ ಸ್ವಲ್ಪ ಕಡಿಮೆಯಾಗಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 2ರಿಂದ ಮಳೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 1ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ವಾಯುಭಾರ ಕುಸಿತವು ಗುಜರಾತ್ ತಲುಪಿದ್ದು, ಗುಜರಾತ್ ರಾಜ್ಯದ ದಕ್ಷಿಣ ಭಾಗಗಳಲ್ಲಿ ಭಾರಿ ಮಳೆ ಹಾಗೂ ಅನಾಹುತ ಸೃಷ್ಟಿಸುತ್ತಿದೆ.
ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮುಂಗಾರು ದುರ್ಬಲಗೊಳ್ಳಲಿದೆ.
ಆಗಸ್ಟ್ 4ರ ಸುಮಾರಿಗೆ ಮಧ್ಯಮ ಸ್ತರದಲ್ಲಿ ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಪರಿಣಾಮ ಹಾಗೂ ಪರಿಸ್ಥಿತಿ ಕಾದು ನೋಡಬೇಕಾಗಿದೆ.
No comments:
Post a Comment